ಸಚಿವೆ ಜೊಲ್ಲೆ ವಿರುದ್ಧ ರಾತ್ರೋರಾತ್ರಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಶಾಸಕ ಪರಣ್ಣ ಮುನವಳ್ಳಿ ಅವರು ಅಪೌಷ್ಟಿಕ ಮಕ್ಕಳಿಗೆಂದೇ ರೂಪಿಸದ ಯೊಜನೆಯಿಂದ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಶುಕ್ರವಾರ ರಾತ್ರಿ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಯಿತು.
ವಿಕಾಸಸೌಧದಲ್ಲಿ ಕಿಕ್ಬ್ಯಾಕ್ ಕೊಟ್ಟರೆ ಟೆಂಡರ್ ಗೋಲ್ಮಾಲ್ ಮಾಡಲು ರೆಡಿ, ನಿಮಗೇ ಟೆಂಡರ್ ಮಾಡಿಸಿಕೊಡ್ತೀನಿ ಎಂದು ಬಿಜೆಪಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ…
View On WordPress
0 notes
ಬೆಳಗಾವಿಯಲ್ಲಿ ಮನೆ ಜಲಾವೃತ..
ಬೆಳಗಾವಿ: ಜಲಾವೃತವಾಗಿದ್ದ ಮನೆಯಲ್ಲಿ ಸಿಲುಕಿಕೊಂಡಿದ್ದ ತುಂಬು ಗರ್ಭಿಣಿಯನ್ನು ಸ್ಥಳೀಯರ ಸಹಾಯದೊಂದಿಗೆ ಜೈಂಟ್ಸ್ ಗ್ರೂಪ್ ಯುವಕರ ತಂಡ ರಕ್ಷಿಸಿ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಇಂದ್ರಪ್ರಸ್ಥ ನಗರದ ಸಾಕಷ್ಟು ಮನೆಗಳು ಜಲಾವೃತವಾಗಿದ್ದವು. ಅದೇ ಏರಿಯಾದಲ್ಲಿ ತುಂಬು ಗರ್ಭಿಣಿಯೊಬ್ಬರು ಮನೆಯಲ್ಲಿ ಸಿಲುಕಿಕೊಂಡಿದ್ದರು. ಈ ವೇಳೆ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಜೈಂಟ್ಸ್ ಗ್ರೂಪ್ ತಂಡದ ಮದನ್…
View On WordPress
0 notes
ಬಲೂನ್. ಇಯರ್ ಬಡ್, ಕ್ಯಾಂಡಿ ಗಳಲ್ಲಿ ಬಳಸುವ ಪ್ಲಾಸ್ಟಿಕ್ ಕಡ್ಡಿಗಳು ಬ್ಯಾನ್
ನವದೆಹಲಿ: ಇಯರ್ ಬಡ್ಸ್, ಐಸ್ ಕ್ರೀಂ, ಕ್ಯಾಂಡಿ ಮತ್ತು ಬಲೂನ್ ಗಳಲ್ಲಿ ಪ್ಲಾಸ್ಟಿಕ್ ಕಡ್ಡಿಗಳ ಬಳಕೆಗೆ ನಿಷೇಧ ಹೇರಲಾಗಿದೆ. 2022 ರ ಜನವರಿ 1 ರಿಂದ ನಿಷೇಧ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಪರಿಸರ ಖಾತೆ ಸಹಾಯಕ ಸಚಿವ ಅಶ್ವಿನಿ ಚೌಬೆ ಸಂಸತ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರ್ಷದ ಆರಂಭದಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು, ಒಂದು ಸಲ ಬಳಕೆಯಾಗುವ ಪ್ಲಾಸ್ಟಿಕ್ ವಸ್ತುಗಳ ತಯಾರಿ, ಆಮದು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲು…
View On WordPress
0 notes
ನಾಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ
ಬೆಂಗಳೂರು : ರಾಜ್ಯಾದ್ಯಂತ ಮಳೆ ಆರ್ಭಟ ಇಂದೂ ಸಹ ಮುಂದುವರೆದಿದ್ದು, ಹಲವೆಡೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತಿದ್ದು, ಭೂ ಕುಸಿತ, ಮನೆ ಕುಸಿತ, ರಸ್ತೆ ಸಂಪರ್ಕ ಕಡಿತಗೊಂಡಿವೆ.
ನಾಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುಚ ಸಿಎಂ ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಇಂದು ಬೆಳೆಗ್ಗೆ ಅತಿವೃಷ್ಟಿ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ…
View On WordPress
0 notes
ಕೃಷ್ಣಾ ತೀರದಲ್ಲಿ ಪ್ರವಾಹ ಭೀತಿ
ರಾಯಚೂರು : ಜಿಲ್ಲೆಯ ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಮೂರುವರೆ ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬಿಡಲಾಗಿದ್ದು, ನದಿ ಪಾತ್ರದ ಪ್ರದೇಶಗಳಾದ ಲಿಂಗಸುಗೂರು, ದೇವದುರ್ಗ, ರಾಯಚೂರು ತಾಲೂಕುಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.
ಇಂದು ಬೆಳಗ್ಗೆ 7 ಗಂಟೆಗೆ ಜಲಾಶಯದಿಂದ 3.5 ಲಕ್ಷ ಕೂಸೆಕ್ ನೀರನ್ನು ಕ್ರಸ್ಟ್ ಗೇಟ್ಗಳ ಮೂಲಕ ಕೃಷ್ಣಾ ನದಿಗೆ ಹರಿಸಲಾಗಿದೆ. ಇದರ ಪರಿಣಾಮ ದೇವದುರ್ಗ ತಾಲೂಕಿನ ಹೂವಿನಹೆಡಗಿ ಸೇತುವೆ ಸಂಪೂರ್ಣ ಮುಳಗಡೆಯಾಗಿದ್ದು, ಸಂಚಾರ ನಿರ್ಬಂಧಿಸಲಾಗಿದೆ.…
View On WordPress
0 notes
ಗುರು ಪೂರ್ಣಿಮಾ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 8:30 ರ ಸುಮಾರಿಗೆ ಆಷಾಡ ಪೂರ್ಣಿಮಾ-ಧಮ್ಮ ಚಕ್ರ ದಿನದಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ತಮ್ಮ ಸಂದೇಶವನ್ನು ಹಂಚಿಕೊಳ್ಳಲಿದ್ದಾರೆ.
‘ನಾಳೆ, ಜುಲೈ 24ರಂದು ಬೆಳಿಗ್ಗೆ 8:30ರ ಸುಮಾರಿಗೆ ಆಷಾಡ ಪೂರ್ಣಿಮಾ-ಧಮ್ಮ ಚಕ್ರ ದಿನದ ಕಾರ್ಯಕ್ರಮದಲ್ಲಿ ನನ್ನ ಸಂದೇಶವನ್ನು ಹಂಚಿಕೊಳ್ಳಲಿದ್ದೇನೆ’ ಎಂದು ಪ್ರಧಾನಿ ಮೋದಿ ಶುಕ್ರವಾರ ಟ್ವೀಟ್ ಮಾಡಿದ್ದಾರೆ.
ಹಿಂದೂ ಕ್ಯಾಲೆಂಡರ್ ನ ಆಷಾಡ ತಿಂಗಳಲ್ಲಿ ಹುಣ್ಣಿಮೆಯ…
View On WordPress
0 notes
ಗೋವಾದಲ್ಲಿ ಭಾರಿ ಮಳೆಯಿಂದ ಪ್ರವಾಹ
ಪಣಜಿ : ಸುಮಾರು 40 ವರ್ಷಗಳ ಬಳಿಕ ಸಂಭವಿಸಿದ ಭೀಕರ ಪ್ರವಾಹದಿಂದ ಗೋವಾ ಶುಕ್ರವಾರ ತತ್ತರಿಸಿದ್ದರಿಂದ ಭಾರಿ ಮಳೆ ಮತ್ತು ನದಿಗಳು ಉಕ್ಕಿ ಹರಿಯುತ್ತಿರುವ ಕಾರಣ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಸುಮಾರು 1,000 ಮನೆಗಳಿಗೆ ಹಾನಿಯಾಗಿದೆ ಮತ್ತು ತಗ್ಗು ಪ್ರದೇಶಗಳಿಂದ ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರು ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡುತ್ತಾ, ಪ್ರವಾಹವು ಸತ್ತಾರಿ, ಬಿಚೋಲಿಮ್, ಪೋಂಡಾ, ಧರ್ಮದೋರಾ, ಬಾರ್ಡೆಜ್…
View On WordPress
0 notes
ಜುಲೈ.26ರಿಂದ ಪದವಿ ತರಗತಿ ಆರಂಭ
ಬೆಂಗಳೂರು : ಜುಲೈ 26ರಿಂದ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ (PG, ಮತ್ತು ಬಿ.ಎಡ್ (B.Ed) ಆಫ್ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು ವಿವಿ ಸುತ್ತೋಲೆಯಲ್ಲಿ ಆದೇಸಿಸಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಕುಲಸಚಿವರು, ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಮತ್ತು ಕರ್ನಾಟಕ ಸರ್ಕಾರದ ನಿರ್ದೇಶನದ ಮೇರೆಗೆ ಜುಲೈ 26ರ ಸೋಮವಾರದಿಂದ ಬೆಂಗಳೂರು ಸೆಂಟ್ರಲ್…
View On WordPress
0 notes
Big Boss :ಜೈಲು ಸೇರಿದ ಪ್ರಶಾಂತ್ ಸಂಬರಗಿ
ಮೂರನೇ ಬಾರಿಗೆ ಪ್ರಶಾಂತ್ ಸಂಬರಗಿ ಕಳಪೆ ಪಡೆದು ಈ ವಾರ ಜೈಲಿಗೆ ಹೋಗಿದ್ದಾರೆ. ಹಾಗೆಯೇ, ಬಿಗ್ಬಾಸ್ ಸೀಸನ್ 8ರಲ್ಲಿ 2ನೇ ಬಾರಿಗೆ ದಿವ್ಯಾ ಉರುಡುಗ ಕ್ಯಾಪ್ಟನ್ ಆಗಿದ್ದಾರೆ. ಇಡೀ ವಾರದಲ್ಲಿ ನಡೆದ ‘ನಾನಾ ನೀನಾ’ ಟಾಸ್ಕ್ನಲ್ಲಿ ವೈಷ್ಣವಿ, ಮಂಜು, ಅರವಿಂದ್, ಶಮಂತ್ ಹಾಗೂ ದಿವ್ಯಾ ಉರುಡುಗ ಹೆಚ್ಚು ಅಂಕಗಳನ್ನು ಪಡೆದಿದ್ದರು. ಹೀಗಾಗಿ ಕ್ಯಾಪ್ಟನ್ಸಿ ಟಾಸ್ಕ್ಗೆ ಆಯ್ಕೆಯಾದರು.
ಮನೆಯ ಸದಸ್ಯರ ಪ್��ಕಾರ ಶುಭಾ ಪೂಂಜಾ ಹಾಗೂ ಪ್ರಶಾಂತ್ ಸಂಬರಗಿ ಕಳಪೆಗೆ ಸಮ ಅಂಕಗಳನ್ನು ಪಡೆದಿದ್ದರು.…
View On WordPress
0 notes
ರಾಜ್ಯಾದ್ಯಂತ ಜುಲೈ 27ರ ವರೆಗೆ ಭಾರಿ ಮಳೆ
ರಾಜ್ಯಾದ್ಯಂತ ಜುಲೈ 27ರವರೆಗೂ ಭಾರಿ ಮಳೆ
ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಈಗಾಗಲೇ ನದಿಗಳು ತುಂಬಿ ಹರಿಯುತ್ತಿದ್ದು, ಇದರ ಬೆನ್ನಲ್ಲೇ ಜುಲೈ 27ರವರೆಗೂ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಮೂರು ಜನರನ್ನು ಬಲಿ ತೆಗೆದುಕೊಂಡಿದೆ, ಎಂಟು ಸ್ಥಳಗಳಲ್ಲಿ ಭೂಕುಸಿತಕ್ಕೆ ಕಾರಣವಾಗಿದೆ ಮತ್ತು ಸುಮಾರು 9000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮುಂದಿನ 24 ಗಂಟೆಗಳ…
View On WordPress
0 notes
ಡ್ಯಾಂನಿಂದ ಹೊರ ಬರುತ್ತಿರುವ ಮೀನುಗಳಿಗೆ ಗಾಳ ಹಾಕಲು ಪೈಪೋಟಿ..
ಶಿವಮೊಗ್ಗ : ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಕೆರೆ,ಕಟ್ಟೆಗಳು ತುಂಬಿ ಹರಿಯುತ್ತಿವೆ. ಇನ್ನು, ಶಿಕಾರಿಪುರ ತಾಲೂಕು ಅಂಬ್ಲಿಗೋಳ ಹೊಸೂರ ಡ್ಯಾಂ ಭರ್ತಿಯಾಗಿದ್ದು, ಡ್ಯಾಂ ಕೋಡಿಯಿಂದ ಹೊರ ಬರುತ್ತಿರುವ ನೀರಿನಲ್ಲಿ ಮೀನು ಬೇಟೆ ಭರ್ಜರಿಯಾಗಿದೆ.
ನೀರಿನೊಂದಿಗೆ ಹೊರ ಬರುತ್ತಿರುವ ಡ್ಯಾಂನಲ್ಲಿರುವ ಮೀನುಗಳನ್ನು ಹಿಡಿಯಲು ಬಲೆ ಹಿಡಿದು ಜನ ಸಾಲುಗಟ್ಟಿ ನಿಂತಿದ್ದಾರೆ. ಭಾರೀ ಮಳೆಯಾಗುತ್ತಿದ್ದರೂ ಅದನ್ನು ಲೆಕ್ಕಿಸದೆ ಬೇಟೆ ಮಾಡಿಯೇ…
View On WordPress
0 notes
ದೆಹಲಿಗೆ ತಲುಪಿದ ಮಂಡ್ಯ ಅಕ್ರಮ ಗಣಿಗಾರಿಕೆ ಸದ್ದು..
ಮಂಡ್ಯ: ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿಚಾರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವೆ ಕೆಲವು ದಿನಗಳ ಹಿಂದೆಯಷ್ಟೇ ದೊಡ್ಡ ಸಂಘರ್ಷಕ್ಕೆ ಕಾರಣವಾಗಿತ್ತು.
ಇದರ ಬೆನ್ನಲ್ಲೇ ಸಂಸದೆ ಸುಮಲತಾ ಅಂಬಿ ಕೆಆರ್ಎಸ್ ಅಣೆಕಟ್ಟು ಹಾಗೂ ಅಕ್ರಮ ಗಣಿಗಾರಿಕೆ ಜಾಗಕ್ಕೆ ಭೇಟಿ ನೀಡಿದ್ದರು. ಅಲ್ಲದೇ ಅಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಸುಮಲತಾ ಧ್ವನಿ ಎತ್ತಿದ್ದರು.
ಇದೀಗ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ದೆಹಲಿಯಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ…
View On WordPress
0 notes
ನಾಳೆ ಐಸಿಎಸ್ಇ ಪರೀಕ್ಷೆ ಫಲಿತಾಂಶ ಪ್ರಕಟ
ನವದೆಹಲಿ: ಐಸಿಎಸ್ ಇ (ಹತ್ತನೆ ತರಗತಿ) ಮತ್ತು ಐಎಸ್ ಸಿ (12ನೇ ತರಗತಿ) ಪರೀಕ್ಷಾ ಫಲಿತಾಂಶ ನಾಳೆ 3 ಗಂಟೆಗೆ ಪ್ರಕಟವಾಗಲಿದೆ ಎಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮೀನೇಷನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಕೌನ್ಸಿಲ್ ವೆಬ್ ಸೈಟ್ ಮತ್ತು ಮೊಬೈಲ್ ಮೂಲಕ 2021ನೇ ಸಾಲಿನ ಐಸಿಎಸ್ ಇ ಮತ್ತು ಐಎಸ್ ಸಿ ಪರೀಕ್ಷಾ ಫಲಿತಾಂಶವನ್ನು ಪಡೆಯಬಹುದಾಗಿದೆ ಅಲ್ಲದೇ, ಮೊಬೈಲ್ ಸಂದೇಶದ ಮೂಲಕವೂ ಪಡೆಯಬಹುದಾಗಿದೆ ಎಂದು ಕೌನ್ಸಿಲ್ ಮಾಹಿತಿ ನೀಡಿದೆ. ಶಾಲೆಗಳಲ್ಲಿ ಪ್ರಾಂಶುಪಾಲರ ಲಾಗಿನ್…
View On WordPress
0 notes
ತಂದೆ ಹೊಡೆದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದರಂತೆ ಜಗ್ಗೇಶ್..!
ಕನ್ನಡ ಚಿತ್ರರಂಗದ ಮೇರುನಟ ಜಗ್ಗೇಶ್ ನವರಸ ನಾಯಕನಾಗಿ ಸಕ್ಸಸ್ ಕಂಡವರು. ಆದರೆ ಚಿತ್ರರಂಗದಲ್ಲಿ ಸಾಕಷ್ಟು ಏಳುಬೀಳುಗಳನ್ನು ಅನುಭವಿಸಿರುವ ನಟ ಇವರು. ಪ್ರತಿ ಯಶಸ್ಸಿನ ಹಿಂದೆ ಸೋಲಿನ ಕಥೆ ಇದ್ದೇ ಇರುತ್ತದಂತೆ. ಹಾಗೆಯೇ ಇವರು ಕೂಡಾ ತಮ್ಮ ಬಾಲ್ಯದ ಕಹಿ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ.
ಜಗ್ಗೇಶ್ ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ಹಂಚಿಕೊಂಡಿದ್ದಾರೆ. 1979ರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದು, ಸೆಕೆಂಡ್ ಕ್ಲಾಸ್ನಲ್ಲಿ ಪಾಸಾಗಿದ್ದರು. ಜಗ್ಗೇಶ್ ತೆಗೆದುಕೊಂಡಿದ್ದ ಈ…
View On WordPress
0 notes
ಟೋಕಿಯೋ ಒಲಿಂಪಿಕ್ಸ್: ಭಾರತ ಮುನ್ನಡೆಸಿದ ಮೇರಿ ಕೋಮ್ ,ಮನ್ಪ್ರೀತ್
ಟೊಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದೆ. ಆಗಸ್ಟ್ 8 ರವರೆಗೆ ನಡೆಯಲಿರುವ ಒಲಿಂಪಿಕ್ಸ್ ಕೊರೋನಾ ಕಾರಣದಿಂದ ಪ್ರೇಕ್ಷಕರಿಲ್ಲದೇ ನಡೆಯಲಿದೆ.
ಜಪಾನ್ ರಾಜಧಾನಿ ಟೊಕಿಯೋ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನೆ ಸಮಾರಂಭದಲ್ಲಿ ಭಾರತದ 19 ಅಥ್ಲೀಟ್ ಗಳು ಭಾಗಿಯಾಗಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 19 ಅಥ್ಲೀಟ್ ಗಳು, 6 ಮಂದಿ ಅಧಿಕಾರಿಗಳು ಮಾತ್ರ ಪಾಲ್ಗೊಂಡಿದ್ದಾರೆ. ಧ್ವಜಧಾರಿಗಳಾಗಿ ಬಾಕ್ಸರ್ ಮೇರಿಕೋಮ್, ಪುರುಷರ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್…
View On WordPress
0 notes
ಕರ್ನಾಟಕದಲ್ಲಿ ಬಿಎಸ್ವೈ ಇಲ್ಲದೇ ಬಿಜೆಪಿಗೆ ಅಧಿಕಾರವಿಲ್ಲ!
ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಸಲ್ಲಿಸುವ ವಿಚಾರ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಾಯಕತ್ವ ಬದಲಾವಣೆ ಸುದ್ದಿಯ ನಡುವೆ ತೀವ್ರ ಸಂಚಲನ ಸೃಷ್ಟಿಸುವಂತಾ ಬೆಳವಣಿಗೆಗಳು ನಡೆಯುತ್ತಿವೆ.
ರಾಜ್ಯದ ಲಿಂಗಾಯತ ಸಮುದಾಯದ ನಾಯಕರು, ಮಠಾಧೀಶರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆನ್ನಿಗೆ ನಿಂತಿದ್ದಾರೆ. ಇದರ ಮಧ್ಯೆ ಕೇಂದ್ರದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕೂಡ ಬಿಜೆಪಿ ಹೈಕಮಾಂಡ್ ನಾಯಕರಿಗೆ ಎಚ್ಚರಿಕೆಯ ಟ್ವೀಟ್…
View On WordPress
0 notes
ತೆಲಂಗಾಣದಲ್ಲಿ ವರುಣನ ಅಬ್ಬರ:ನೆರವು ನೀಡಿ ಎಂದ ರಾಹುಲ್ ಗಾಂಧಿ
ನವದೆಹಲಿ : ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀಕರ ರೂಪ ಪಡೆಯುತ್ತಿದೆ. ಈ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಜ್ಯದ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ನನ್ನ ಪ್ರಕಾರ ತೆಲಂಗಾಣದಲ್ಲಿರುವ ನಮ್ಮ ಸಹೋದರ ಸಹೋದರಿಯರು ಭಾರಿ ಪ್ರವಾಹವನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕೆ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ…
View On WordPress
0 notes